06 December 2010

ದಿ: 04/12/2010ರ ಸಭೆಯ ಮನನ Proceedings

ಮಾನ್ಯ ಸದಸ್ಯರಿಗೆ
ದಿನಾಂಕ: 4.12.2010ರಂದು ನಡೆದ ಮನನ ಸಭೆಯಲ್ಲಿ ಬಿ.ಎಸ್.ಲಕ್ಷ್ಮಣ, ಗೋಪಾಲ.ಜಿ.ಕೃಷ್ಣಾಜಿ, ಹರಿಪ್ರಸಾದ್ ಹಾಗೂ ಕೆ.ಪದ್ಮನಿದೇವಿ ಇವರುಗಳು ಹೊಸದಾಗಿ ತಂಡಕ್ಕೆ ಸೇರ್ಪಡೆಯಾಗಿದ್ದು, ಅವರಿಗೆ ನಮ್ಮ ಮೊದಲಿಗೆ ಸ್ವಾಗತ ಕೋರಲಾಯಿತು.
ಅಂದಿನ ಸಭೆಯಲ್ಲಿ ಪ್ರಮುಖವಾಗಿ 'ಮನನ ಮಾಸಿಕ ಪತ್ರಿಕೆ'ಯನ್ನು ಹೊರತರುವ ಬಗ್ಗೆ ಚರ್ಚಿಸಲಾಯಿತು. ಈ ಕುರಿತು ಅನೇಕ ಉಪಯುಕ್ತ ಸಲಹೆಗಳನ್ನು ತಂಡದ ಸದಸ್ಯರಾದ ರೇವಪ್ಪ, ನಾಗರತ್ನ, ಬಿ.ಎಸ್.ಲಕ್ಷ್ಮಣ, ಶಾಂತರಾಮ್, ಸೀನು, ರಮೇಶ್, ಹರಿಪ್ರಸಾದ್, ಗೋಪಾಲ್ ಇವರುಗಳು ನೀಡುತ್ತಾ, ಪತ್ರಿಕೆಯ ವಿನ್ಯಾಸ, ಆಕಾರ, ಪತ್ರಿಕೆ ಒಳಗೊಳ್ಳುವ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಬೆಲೆ ನಿಗಧಿಪಡಿಸುವ ಬಗ್ಗೆ ಹಾಗೂ ಪತ್ರಿಕೆಯ ಪುಟಗಳನ್ನು ಹೆಚ್ಚಿಸುವ ಬಗ್ಗೆಯೂ ಸಹ ಇವರುಗಳು ತಮ್ಮ ಸಲಹೆಗಳನ್ನು ನೀಡಿದರು. ಅವರೆಲ್ಲರ ಸಲಹೆ ಮತ್ತು ಸೂಚನೆಯ ಮೇರೆಗೆ ಪತ್ರಿಕೆಯ ವಿನ್ಯಾಸ ಮತ್ತು ವಿಷಯಗಳನ್ನು ಈ ಮುಂಚೆಯೇ ಚರ್ಚಿಸಿದಂತೆ ಹೆಚ್ಚು ಪ್ರಸಕ್ತ ವಿದ್ಯಮಾನಗಳಿಗೆ ಗಮನ ಕೊಟ್ಟು ಉತ್ತಮ ರೀತಿಯಲ್ಲಿ ಹೊರತರಲು ಒಮ್ಮತಿಸಿದರು. ಪ್ರಸ್ತುತ ಒಂದು ವರ್ಷದ ಕಾಲ ಹಿಂದಿನ ಸಭೆಯಲ್ಲಿ ಚರ್ಚಿಸಿದಂತೆ ಹಾಗೂ ಈ ಸಭೆಯಲ್ಲಿ ಒಮ್ಮತ ನಿರ್ಣಯಕ್ಕೆ ಬಂದಂತೆ ಪತ್ರಿಕೆಯನ್ನು ಮಾಸಿಕವಾಗಿಯೇ ಹಾಗೂ ಈಗಾಗಲೇ ತಮಗೆ ತಿಳಿಸಿರುವ ಮಾದರಿಯಲ್ಲಿಯೇ ಹೊರತರುವ ಅಭಿಪ್ರಾಯಕ್ಕೆ ಬರಲಾಯಿತು.
ಸಭೆಯಲ್ಲಿ ಉಪಯುಕ್ತ ಸಲಹೆಗಳನ್ನು ನೀಡಿದ ರೇವಪ್ಪ, ಲಕ್ಷ್ಮಣ, ನಾಗರತ್ನ, ಜಿ.ಎಸ್.ಪ್ರಕಾಶ್, ಮುನಿಆಂಜಿನಪ್ಪ, ರೇವಪ್ಪ, ಶಾಂತಾರಾಂ, ಗೋಪಾಲ್, ರಮೇಶ್, ಪಿ.ಸೀನು, ಪದ್ಮಿನಿ ಹಾಗೂ ಮಂಜು ಇವರುಗಳಿಗೆ ಮತ್ತೊಮ್ಮೆ ವಂದನೆಗಳನ್ನು ತಿಳಿಸಿ ಸಭೆಯನ್ನು ಮುಕ್ತಾಯಗೊಳಿಸಲಾಯಿತು.
-ಮನನ ತಂಡದ ಪರವಾಗಿ

No comments:

ಸಂಗಡಿಗರು

ತಾಣದ ಬಗೆಗಿನ ಅಭಿಪ್ರಾಯವನ್ನ ಇಲ್ಲಿ ದಾಖಲಿಸಿ

ಸಂಗಡಿಗ ಸಚಿವಾಲಯ ಬ್ಲಾಗಿಗರು

  • ಮರಳಿ ಬ್ಲಾಗಿಗೆ... - ಪ್ರಿಯ ಸ್ನೇಹಿತರೇ... ಇಂದು ಡಿಸೆಂಬರ್ 3ನೇ ತಾರೀಖು, ವಿಶ್ವ ಅಂಗವಿಕಲರ ದಿನಾಚರಣೆ. ನನ್ನಂತಹ ಎಲ್ಲಾ ಸ್ನೇಹಿತರಿಗೂ ಈ ದಿನದ ಶುಭಾಶಯಗಳು. ಸರಿಸುಮಾರು ಐದು ವರ್ಷಗಳ ಹಿಂದೆ ಒಂದೊಳ್ಳೆ ಉದ್ದ...
    9 years ago
  • ಏನಿದು FSSAI ? - ತಾವುಗಳು ಇತ್ತೀಚೆಗೆ ಎಲ್ಲ ಮಾದರಿಯ ಆಹಾರ ಪದಾರ್ಥಗಳ ಪೊಟ್ಟಣದ ಮೇಲೆ fssai ಚಿಹ್ನೆ ಹಾಗೂ ಲೈಸೆನ್ಸ ನಂಬರ್ ಗಮನಿಸಿರಬಹುದು. ಏನಿದು fssai ? ಸ್ವಲ್ಪ ತಿಳಿಯೋಣ ಬನ್ನಿ : - ಇದ...
    9 years ago
  • ಏಳಿಗೆ - ಉಳುವ ನೆಲವ ಮಾರಿ ಜೋಪಡಿಯ ಬಿಟ್ಟು ಕಲ್ಲು ಕಟ್ಟಡವ ಕಟ್ಟಿ ಕಾಲು ದಾರಿಯ ಅಳಿಸಿ ನುಣ್ಣನೆಯ ದಾರಿಯ ಬೆಳೆಸಿ ವಿಷ ಗಾಳಿಯ ಕುಡಿದು ಅನ್ನಕ್ಕಾಗಿ ಅಲೆಯುವ ನಾವು ಅಭಿವೃದ್ಧಿಹೊಂದಿದವರು
    11 years ago
  • ** ಮಧುರ ಪ್ರೇಮ ** - ಬೆಚ್ಚದಿರು ಕೋಮಲ ಬಾಲೆ ನಮ್ಮದು ನಿಷ್ಕಪಟ ಪ್ರೇಮಲೀಲೆ ತನುವಲ್ಲಿ ಉರಿಯುತ್ತಿದೆ ಬೆಚ್ಚನೆಯ ಜ್ವಾಲೆ ಮನದಲ್ಲಿ ತುಂಬಿ ಹರಿಯುತ್ತಿದೆ ಆಸೆಯ ನಾಲೆ ಪ್ರತಿ ಮಾತು ಸಿಹಿಯಾದ ಸಾಲೆ ಪ್ರತಿ ಮುತ್ತ...
    13 years ago
  • ಈ ದಿನದ ಇತಿಹಾಸ : 18ನೇ ನವೆಂಬರ್ - . *ಇಂದಿನ ಇತಿಹಾಸ - 18ನೇ ನವೆಂಬರ್ * ಜಾಗತಿಕ *ಕ್ರಿ.ಪೂ. 45* : *ಕ್ರಿ.ಶ. 1477* : ಪ್ರಥಮ ಆಂಗ್ಲ ಪುಸ್ತಕ " Dictes & Sayengis of the Phylosophers " ದ ಮುದ್ರಣ *1...
    13 years ago
  • GLOBAL WARMING (WARNING!!!) - DO WE REALLY CARE??!!!! Nowadays much talk about topic is “Global Warming”. What is this global warming ?? And its impact ?? Let me say something on thi...
    13 years ago
  • KAS 2010 Key Answers : ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ - 2010 - ಸಾಮಾನ್ಯ ಅಧ್ಯಯನ - { ಇಲ್ಲಿ ನೀಡಿರುವ ಪ್ರಶ್ನೆಪತ್ರಿಕೆಯನ್ನು ಪ್ರಾಮಾಣಿಕವಾಗಿ ಬಿಡಿಸಲು ಅನುವಾಗುವಂತೆ, ಪ್ರತಿ ಪ್ರಶ್ನೆಯ ನಾಲ್ಕು ಆಯ್ಕೆಗಳಲ್ಲಿ ಸರಿ ಉತ್ತರವನ್ನ Java Code ನಲ್ಲಿ ಬರೆಯಲಾಗಿದ್ದು, ನ...
    13 years ago
  • ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ - : ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ : ಕನ್ನಡ ಸಾಹಿತ್ಯ ಕನ್ನಡ ಸಿನೆಮಾ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕ ಕರ್ನಾಟಕ...
    13 years ago